ಡಿಕೆ ಶಿವಕುಮಾರ್ ಸಂಪುಟಕ್ಕೆ ಖಾತೆ ಹಂಚಿಕೆ: ಡಿಸಿಎಂ ಪರಮೇಶ್ವರ್’ಗೆ ಕಂದಾಯ ಇಲಾಖೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆ ಮಾಡಲಾಗಿದ್ದು, ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ 13 ಸಚಿವರಿಗೆ ವಿವಿಧ ಇಲಾಖೆಗಳ ಜವಾಬ್ದಾರಿ ವಹಿಸಲಾಗಿದೆ.

ಸಚಿವರ ಖಾತೆ ಹಂಚಿಕೆ ಪಟ್ಟಿಯನ್ನು ರಾಜ್ಯಪಾಲ Thawar Chand Gehlot ಅವರಿಗೆ ಕಳುಹಿಸಲಾಗಿದ್ದು, ಅವರ ಅನುಮೋದನೆಯ ಬಳಿಕ ಅಧಿಕೃತ ಗೆಜೆಟ್ ಅಧಿಸೂಚನೆ ಪ್ರಕಟವಾಗಲಿದೆ.

ಸಚಿವರು ಮತ್ತು ಖಾತೆಗಳು

  • ಡಿ.ಕೆ. ಶಿವಕುಮಾರ್ (ಮುಖ್ಯಮಂತ್ರಿ) – ಹಣಕಾಸು ಇಲಾಖೆ, ಡಿಪಿಎಆರ್ (DPAR) ಹಾಗೂ ಇತರೆ ಹಂಚಿಕೆ ಮಾಡದ ಖಾತೆಗಳು.
  • ಡಾ. ಜಿ. ಪರಮೇಶ್ವರ್ – ಕಂದಾಯ ಇಲಾಖೆ, ಕ್ರೀಡಾ ಮತ್ತು ಯುವಜನ ಸಬಲೀಕರಣ.
  • ಪ್ರಿಯಾಂಕ್ ಖರ್ಗೆ – ಗೃಹ ಇಲಾಖೆ ಹಾಗೂ ಐಟಿ-ಬಿಟಿ.
  • ಕೆ.ಜೆ. ಜಾರ್ಜ್ – ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆ.
  • ಎಂ.ಬಿ. ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ.
  • ಸತೀಶ್ ಜಾರಕಿಹೊಳಿ – ಲೋಕೋಪಯೋಗಿ ಇಲಾಖೆ.
  • ಕೃಷ್ಣ ಬೈರೇಗೌಡ – ಬೆಂಗಳೂರು ನಗರಾಭಿವೃದ್ಧಿ (ಜಿಬಿಎ).
  • ರಾಮಲಿಂಗಾರೆಡ್ಡಿ – ಜಲಸಂಪನ್ಮೂಲ ಇಲಾಖೆ.
  • ಕೆ.ಎಚ್. ಮುನಿಯಪ್ಪ – ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ.
  • ಬೈರತಿ ಸುರೇಶ್ – ಸಾರಿಗೆ ಇಲಾಖೆ.
  • ಯು.ಟಿ. ಖಾದರ್ – ಆರೋಗ್ಯ ಇಲಾಖೆ.
  • ಡಾ. ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ಧಿ ಇಲಾಖೆ.
  • ಶರಣಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ ಇಲಾಖೆ.
  • ಈಶ್ವರ್ ಖಂಡ್ರೆ – ಗ್ರಾಮೀಣಾಭಿವೃದ್ಧಿ ಇಲಾಖೆ.

Leave a Reply

Your email address will not be published. Required fields are marked *