ಸಿಎಂ ಡಿ.ಕೆ. ಶಿವಕುಮಾರ್‌ಗೆ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಬೆಂಗಳೂರು: ಕಾಂಗ್ರೆಸ್‌ನ ಚುನಾವಣಾ ತಂತ್ರಗಾರ ಎಂದೇ ಗುರುತಿಸಿಕೊಂಡಿರುವ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.

ಸುನೀಲ್ ಕನುಗೋಳು ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಿ ನೇಮಕಾತಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿಯೂ ಕನುಗೋಳು ಅವರು ಮುಖ್ಯ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು.

ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ನ ‘ಪೇಸಿಎಂ’ ಅಭಿಯಾನ, ಗ್ಯಾರಂಟಿ ಯೋಜನೆಗಳ ಪ್ರಚಾರ ತಂತ್ರ ಹಾಗೂ ಪಕ್ಷದ ಚುನಾವಣಾ ಕಾರ್ಯತಂತ್ರ ರೂಪಿಸುವಲ್ಲಿ ಸುನೀಲ್ ಕನುಗೋಳು ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ.

ಪಕ್ಷದ ಗೆಲುವಿಗೆ ತೆರೆಮರೆಯಲ್ಲಿ ತಂತ್ರಗಾರಿಕೆ ರೂಪಿಸಿದ್ದ ಅವರು, ಇದೀಗ ಆಡಳಿತಾತ್ಮಕ ವಿಚಾರಗಳಲ್ಲಿಯೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡುವ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

Leave a Reply

Your email address will not be published. Required fields are marked *